12:10 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು