4:04 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

16/08/2024, 17:15

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್‌ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್‌ಗಳಾಗಿ ದೇಶ ಸೇವೆಗೆ ಮತ್ತು ಸುರಕ್ಷಿತ ಭವಿಷ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಿಕೊಳ್ಳುವಂತೆ ಸಿಬ್ಬಂದಿಗೆ ಪ್ರೇರೇಪಿಸಿದರು.

ರಮೇಶ್ ಕಾನಡೆ, ಡಿಜಿಎಂ ಅಶ್ವಿನಿ ಕುಮಾರ್, ಡಿಜಿಎಂ ಸನೀಲ್ ಕುಮಾರ್, ಮಂಗಳೂರು ನಗರದ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು, ಅಧಿಕಾರಿಗಳು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸ್ವಾತಂತ್ರ್ಯದ ಭಾವನೆಯನ್ನು ಪ್ರತಿಬಿಂಬಿಸುವ ಬಣ್ಣದ ಉಡುಗೆಗಳಲ್ಲಿ ಭಾಗವಹಿಸಿದರು. ಸುರಕ್ಷತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು ಮತ್ತು ಸುರಕ್ಷತಾ ಸಿಬ್ಬಂದಿಯ ನಿಸ್ವಾರ್ಥ ತ್ಯಾಗವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು