10:17 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಸಂಸದ ಬಿ. ವೈ ರಾಘವೇಂದ್ರ ಜನ್ಮದಿನ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

16/08/2024, 22:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕುಕ್ಕೆ ಪ್ರಶಾಂತ್, ಬಿ. ವೈ. ರಾಘವೇಂದ್ರರವರು ಯುವ ಮುಖಂಡರಾಗಿ ಸಂಘಟನೆ ಮತ್ತು ಕೆಲಸದಲ್ಲಿ ರಾಜ್ಯಕ್ಕೆ
ಮಾದರಿಯಾಗಿರುವ ನಾಯಕ, ಅವರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಾಗೂ ಹಂಪಲು ವಿತರಣೆ ಮಾಡುತ್ತಿದ್ದೇವೆ. ಅವರು ತಮ್ಮ ಕೆಲಸಗಳ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ. ಇನ್ನಷ್ಟು ಕೆಲಸ ಮಾಡುವ ಶಕ್ತಿ ಭಗವಂತ ನೀಡಲಿ ಎಂದು ಹಾರೈಸಿದರು.


ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರ್ ಮಾತನಾಡಿ ಸಂಸದರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ. ಸಂಸದರು ನಮ್ಮ ಕ್ಷೇತ್ರಕ್ಕೆ, ತಾಲೂಕಿಗೆ ಮಾತ್ರವಲ್ಲದೆ ಜಿಲ್ಲೆಗೆ ಆಸ್ತಿ ಇದ್ದಂತೆ. ಅವರ ಜನ್ಮದಿನ ವಿಶೇಷವಾಗಿರಲಿ ಎಂಬ ಕಾರಣದಿಂದ ಹೀಗೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಧುರಾಜ್ ಹೆಗ್ಡೆ, ಚಂದವಳ್ಳಿ ಸೋಮಶೇಖರ್, ರಕ್ಷಿತ್ ಮೇಗರವಳ್ಳಿ,
ವಿನುತ್ ಗೌಡ, ಪ್ರಮೋದ್ ಪಮ್ಮ, ಅನೂಪ್ ಉಪಾಧ್ಯ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು