12:16 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

06/08/2024, 19:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,
ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು
ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು