6:18 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಂಸದ ಬಿ. ವೈ ರಾಘವೇಂದ್ರ ಜನ್ಮದಿನ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

16/08/2024, 22:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕುಕ್ಕೆ ಪ್ರಶಾಂತ್, ಬಿ. ವೈ. ರಾಘವೇಂದ್ರರವರು ಯುವ ಮುಖಂಡರಾಗಿ ಸಂಘಟನೆ ಮತ್ತು ಕೆಲಸದಲ್ಲಿ ರಾಜ್ಯಕ್ಕೆ
ಮಾದರಿಯಾಗಿರುವ ನಾಯಕ, ಅವರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಾಗೂ ಹಂಪಲು ವಿತರಣೆ ಮಾಡುತ್ತಿದ್ದೇವೆ. ಅವರು ತಮ್ಮ ಕೆಲಸಗಳ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ. ಇನ್ನಷ್ಟು ಕೆಲಸ ಮಾಡುವ ಶಕ್ತಿ ಭಗವಂತ ನೀಡಲಿ ಎಂದು ಹಾರೈಸಿದರು.


ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರ್ ಮಾತನಾಡಿ ಸಂಸದರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ. ಸಂಸದರು ನಮ್ಮ ಕ್ಷೇತ್ರಕ್ಕೆ, ತಾಲೂಕಿಗೆ ಮಾತ್ರವಲ್ಲದೆ ಜಿಲ್ಲೆಗೆ ಆಸ್ತಿ ಇದ್ದಂತೆ. ಅವರ ಜನ್ಮದಿನ ವಿಶೇಷವಾಗಿರಲಿ ಎಂಬ ಕಾರಣದಿಂದ ಹೀಗೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಧುರಾಜ್ ಹೆಗ್ಡೆ, ಚಂದವಳ್ಳಿ ಸೋಮಶೇಖರ್, ರಕ್ಷಿತ್ ಮೇಗರವಳ್ಳಿ,
ವಿನುತ್ ಗೌಡ, ಪ್ರಮೋದ್ ಪಮ್ಮ, ಅನೂಪ್ ಉಪಾಧ್ಯ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು