2:10 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಹುಲಿ ಮರಿಗಳೊಂದಿಗೆ ವಿಡಿಯೋ ಚಿತ್ರೀಕರಣ, ತಾಯಿ ಹುಲಿ ನಾಪತ್ತೆ: ಸಿಐಡಿ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

06/11/2025, 20:10

ಬೆಂಗಳೂರು(reporterkarnataka.com): ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.
ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು