6:16 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/03/2023, 21:46

ಸುರತ್ಕಲ್(reporterkarnataka.com):
ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ
6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30 ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19 ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19 ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ
ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80. ಲಕ್ಷ ಒಟ್ಟು ಸೇರಿ 1.48 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು.

ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್, ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ದಾವೂದ್ ಬಿಎಂಆರ್, ರಮೇಶ್ ಆಚಾರ್ಯ, ಭಾಸ್ಕರ ಸನಿಲ್, ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು