6:55 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/03/2023, 21:46

ಸುರತ್ಕಲ್(reporterkarnataka.com):
ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ
6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30 ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19 ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19 ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ
ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80. ಲಕ್ಷ ಒಟ್ಟು ಸೇರಿ 1.48 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು.

ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್, ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ದಾವೂದ್ ಬಿಎಂಆರ್, ರಮೇಶ್ ಆಚಾರ್ಯ, ಭಾಸ್ಕರ ಸನಿಲ್, ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು