2:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/03/2023, 21:46

ಸುರತ್ಕಲ್(reporterkarnataka.com):
ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ
6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30 ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19 ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19 ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ
ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80. ಲಕ್ಷ ಒಟ್ಟು ಸೇರಿ 1.48 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು.

ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್, ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ದಾವೂದ್ ಬಿಎಂಆರ್, ರಮೇಶ್ ಆಚಾರ್ಯ, ಭಾಸ್ಕರ ಸನಿಲ್, ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು