11:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ 

15/05/2021, 19:43

ಚಿತ್ರ : ಮಂಜು ನೀರೇಶ್ವಾಲ್ಯ                      ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. 

ಸುಮಾರು 1.7 ಕೋಟಿ ವೆಚ್ಚದಲ್ಲಿ ನೂತನವಾಗಿ ಕಾಷ್ಠ ಶಿಲ್ಪದ ಬ್ರಹ್ಮ ರಥವು ಕೋಟೇಶ್ವರದಲ್ಲಿರುವ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಶಾಲೆ ಯಲ್ಲಿ ನಿರ್ಮಾಣ ಪ್ರಾರಂಭವಾಗಿದ್ದು, ಅಕ್ಷಯ ತ್ರಿತೀಯದ ಪುಣ್ಯ ದಿನದಂದು ಕಾಷ್ಠ ರಥದ ಹೊಸ ಮರದ ಮುಹೂರ್ತ ಪೂಜೆ ನೆರವೇರಿತು. ಮುಂದಿನ ವರ್ಷ ಜರಗಲಿರುವ ಮಂಗಳೂರು ರಥೋತ್ಸವಕ್ಕೆ ನೂತನ ರಥ ನಿರ್ಮಾಣ ಪೂರ್ಣಗೊಂಡು ಶ್ರೀ ದೇವರಿಗೆ ಸಮರ್ಪಣೆ ಗೊಳ್ಳಲಿರುವುದು.  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಆದೇಶ ಪ್ರಕಾರ ರಥ ನಿರ್ಮಾಣ ಕಾರ್ಯ ಪ್ರಾರಂಭಗೊಂಡಿದ್ದು , ಶ್ರೀ ಗಳವರ ದಿವ್ಯ ಉಪಸ್ಥಿತಿಯಲ್ಲಿ ರಥ ಸಮರ್ಪಣೆಗೊಳ್ಳಲಿರುವುದು. ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ದೇವಳದ ತಂತ್ರಿಗಳಾದ ಕಾಶೀನಾಥ್ ಆಚಾರ್ಯ , ಲೆಕ್ಕ ಪರಿಶೋಧಕ ಎಂ . ಜಗನ್ನಾಥ್ ಕಾಮತ್ , ಡಿ ವಾಸುದೇವ್ ಕಾಮತ್ , ಜೀವನ್ ರಾಜ್ ಶೆಣೈ , ರಥಶಿಲ್ಪಿಗಳಾದ ಲಕ್ಷ್ಮಿ ನಾರಾಯಣ ಆಚಾರ್ಯ ಮತ್ತು ಅವರ ಪುತ್ರ ರಾಜಗೋಪಾಲ ಆಚಾರ್ಯ ಅವರ ನೇತ್ರತ್ವದಲ್ಲಿ ನಿರ್ಮಾಣಗೊಳ್ಳಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು