5:27 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ

25/10/2025, 15:46

ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20 ಲಕ್ಷ ವಿಮೆ

ಬೆಂಗಳೂರು(reporterkarnataka.com): ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು/ ಹಸಿರು ಸೈನಿಕರು ಅಪಾಯ ಎದಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು, ಇಲಾಖೆ ಕೆಲವು ಶೌರ್ಯಶಾಲಿ ಹಸಿರು ಯೋಧರನ್ನು ಕಳೆದುಕೊಂಡಿದೆ. ಇವರೆಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಈ ತಿಳಿವಳಿಕೆ ಒಬ್ಬಂದ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ವನ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮುಂಚೂಣಿ ಹೊರಗುತ್ತಿಗೆ ಸಿಬ್ಬಂಯ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿಗೂ 20 ಲಕ್ಷಗಳ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗಿಗಳಿಗೆ, ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ 1 ಕೋಟಿ ರೂ.ಗಳ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ನೀಡುತ್ತದೆ. ಒಂದೊಮ್ಮೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಹೆಚ್ಚುವರಿಯಾಗಿ 25 ಲಕ್ಷ ರೂ.ಗಳನ್ನು ಬ್ಯಾಂಕ್ ಪಾವತಿಸಲಿದೆ ಎಂದು ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ಇಲಾಖೆಯ ನೌಕರರು ಪಿಂಚಣಿ ಖಾತೆಯನ್ನು ಮುಂದುವರಿಸಿದರೆ, ಈ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರಿಯುತ್ತದೆ. ಇದಲ್ಲದೆ, ಖಾಯಂ ಉದ್ಯೋಗಿಗಳಿಗೆ ರೂ.10.00 ಲಕ್ಷಗಳ ಜೀವ ವಿಮಾ ರಕ್ಷಣೆಯನ್ನು ಸಹ ಬ್ಯಾಂಕ್ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆಯ ನೌಕರರು ಮತ್ತು ಅವರ ಕುಟುಂಬಗಳ ಹಿತದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆಯು ಬ್ಯಾಂಕ್‌ ಆಫ್‌ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದ್ದು, ಹಲವು ವಿಶೇಷ ಸವಲತ್ತುಗಳೂ ಲಭಿಸಲಿವೆ. ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವಂತೆ ಮತ್ತು ಬಿಓಬಿಯಲ್ಲಿ ಸಂಬಳ ಖಾತೆ ತೆರೆಯಲು ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು