5:44 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು