9:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗುತ್ತಿಗೆದಾರರಿಗೆ ಲೈಸನ್ಸ್ ನೀಡಲು 10 ಸಾವಿರ ಲಂಚ: ಡಿ ಗ್ರೂಪ್ ನೌಕರ ಲೋಕಾಯುಕ್ತ ಬಲೆಗೆ

18/02/2026, 20:08

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಗುತ್ತಿಗೆದಾರ ಪರವಾನಗಿ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿ ನೌಕರನೊಬ್ಬ ಲಂಚ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಮಡಿಕೇರಿಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಡಿ ದರ್ಜೆ ನೌಕರ ಶರತ್ ಎಂಬಾತ ಕುಶಾಲನಗರ ಸಮೀಪ ಕೂಡು ಮಂಗಳೂರು ಬಸವತ್ತೂರು ಬಳಿ ತನ್ನ ಮನೆಯಲ್ಲಿ ಗುತ್ತಿಗೆದಾರರಿಗೆ ಲೈಸನ್ಸ್ ನೀಡಲು ರಾಘವೇಂದ್ರ ಎಂಬುವರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಗುತ್ತಿಗೆ ದಾರ ಲೈಸನ್ಸ್ ನೀಡಲು ತನಗೆ 10 ಸಾವಿರ ಹಾಗೂ ಕಚೇರಿಯಲ್ಲಿ 4 ಸಾವಿರ ಸೇರಿದಂತೆ ಒಟ್ಟು 14 ಸಾವಿರ ರೂ ಗಳಿಗೆ ಬೇಡಿಕೆ ಇಟ್ಟಿದ್ದ, ಅದ್ರಂತೆ ದೂರುದಾರ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಲೋಕಾಯುಕ್ತ ಎಸ್ಪಿ ಉದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಯನ್ನು ಕೆಡವಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು