11:27 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

120 ಮಂದಿಯ ಕಾಂಗ್ರೆಸ್ ಮೊದಲ ಪಟ್ಟಿ 2 ದಿನಗಳಲ್ಲಿ ಬಿಡುಗಡೆ?: ಕರಾವಳಿಯಲ್ಲಿ ಕೈ ಅಭ್ಯರ್ಥಿಗಳು ಯಾರು ಯಾರು?

05/02/2023, 12:02

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಶೀಘ್ರದಲ್ಲೇ 120 ಮಂದಿ ಅಭ್ಯರ್ಥಿಗಳ ಪ್ರಥಮ ಯಾದಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ, ಮಲೆನಾಡು ಹಾಗೂ ಮೈಸೂರು ಜಿಲ್ಲೆಗಳ ಅಭ್ಯರ್ಥಿ ಗಳ ಹೆಸರು ಮೊದಲ ಪಟ್ಟಿಯಲ್ಲಿ ಸೇರಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಬಾರಿಯ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳ ಬದಲಿಗೆ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಕಾಂಗ್ರೆಸ್ ಅದೃಷ್ಟ ಪರೀಕ್ಷೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಮೊದಲ ಪಟ್ಟಿ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮೊನ್ನೆ ಮೊನ್ನೆ ಮಹತ್ವದ ಸಭೆ ನಡೆಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆದಿತ್ತು.

ಪಕ್ಷದ ಜಿಲ್ಲಾ ಘಟಕಗಳು ಮಾಡಿರುವ ಶಿಫಾರಸು, ಕೆಪಿಸಿಸಿ ಕಾರ್ಯಾಧ್ಯಕ್ಷರು ತಯಾರಿಸಿದ ಪಟ್ಟಿ, ಕೆಪಿಸಿಸಿ ಅಧ್ಯಕ್ಷರು ನಡೆಸಿದ ಸರ್ವೇ ಹಾಗೂ ಪ್ರತಿಪಕ್ಷದ ನಾಯಕರು ನಡೆಸಿದ ಸರ್ವೇ ವರದಿಯನ್ನು ಕ್ರೋಢಿಕರಿಸಿ ಚರ್ಚೆ ನಡೆಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು