7:02 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

15 ಕೋಟಿ ವೆಚ್ಚದಲ್ಲಿ ಸೆಂಟ್ರಲ್, ಜಂಕ್ಷನ್ ರೈಲ್ವೆ ನಿಲ್ದಾಣ ಅಭಿವೃದ್ಧಿ: ಸಂಸದ ನಳಿನ್ ಕುಮಾರ್ ಕಟೀಲ್

11/07/2021, 21:02

ಮಂಗಳೂರು(reporterkarnataka news): ಮುಂಬರುವ ದಿನಗಳಲ್ಲಿ ಮಾನವರಹಿತ ರೈಲು ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದರು.

ಅವರು ಭಾನುವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಶವಂತಪುರ- ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ರೈಲ್ವೆ ಕ್ರಾಸ್ ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರ್ಕಾರವು ಯೋಚಿಸಿ, ಈಗಾಗಲೇ ಯೋಜನೆಯನ್ನು ರೂಪಿಸಿದೆ, ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ ಎಂದು ಅವರು ಹೇಳಿದರು.

ರೈಲ್ವೆ ಇಲಾಖೆಯು, ದಕ್ಷಿಣ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ, 2014ರಿಂದ ಕೆಲವು ಯೋಜನೆಗಳು ಹೆಚ್ಚು ವೇಗ ಪಡೆದಿವೆ, ಮುಖ್ಯವಾಗಿ ರೈಲಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ, ಅದರಂತೆಯೇ ಹೆಚ್ಚಿನ ಅನುದಾನವನ್ನು ಸಹ ನೀಡಲಾಗುತ್ತದೆ, ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 13.5 ಕೋಟಿ ಹಾಗೂ ಮಂಗಳೂರು ಜಂಕ್ಷನ್ ಗೆ 1.2 ಕೋಟಿ ರೂ.ಗಳು ಸೇರಿದಂತೆ ಒಟ್ಟು 15 ಕೋಟಿ ರೂ.ಗಳಲ್ಲಿ ಕೈಗೊಳ್ಳಲಾದ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ,  ಅದರೊಂದಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲೂ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಅದಕ್ಕೆ ಒತ್ತಾಸೆಯಾಗಿದ್ದಾರೆ ಎಂದು ಹೇಳಿದರು.

ಮಂಗಳೂರು – ವಿಜಯಪುರ ರೈಲು ಸಮಯದಲ್ಲಿ ಬದಲಾವಣೆ ಆಗಬೇಕು, ಅದು ಮಂಗಳೂರು ಸೆಂಟ್ರಲ್ ನಿಂದ ಸಂಚರಿಸಬೇಕು, ಹಗಲಿನಲ್ಲಿ ಸಂಚರಿಸುವ ಗೋಮ್ಮಟೇಶ್ವರ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ 8.15ರ ಬದಲಾಗಿ 9.30ಕ್ಕೆ ಹೊರಡಬೇಕು, ವಾರದ 7 ದಿನ ಸಂಚರಿಸಬೇಕು ಎನ್ನುವ ಬೇಡಿಕೆ ಪ್ರಯಾಣಿಕರದ್ದಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮಕ್ಕೆ ಮತ್ತಷ್ಟು ಪುಷ್ಠಿ ನೀಡಲು ಪ್ರಯಾಣಿಕರಿಗೆ ಪಶ್ಚಿಮಘಟ್ಟದ ಬೆಟ್ಟಗುಡ್ಡಗಳು, ಝರಿ ತೋರೆಗಳು ಸೇರಿದಂತೆ ಪ್ರಕೃತಿಯ ರಮಣೀಯ ಸೊಬಗನ್ನು ವೀಕ್ಷಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆಯಿಂದ ವಿಸ್ಟಾಡೋಮ್ ಬೋಗಿಗಳ ರೈಲು ಪ್ರಯಾಣಕ್ಕೆ ಇಂದು ಚಾಲನೆ ನೀಡಲಾಗಿದೆ, ಪ್ರತಿ ಬೋಗಿಯಲ್ಲಿ ಒಟ್ಟು 44 ಆಸನಗಳಿವೆ,  ಈ ಬೋಗಿಯಲ್ಲಿ ಫೋಟೋಗ್ರಫಿಗೆ ಪ್ರತ್ಯೇಕ, ವಿಕಲಚೇತನರ ಅನುಕೂಲಕ್ಕೆ ಪ್ರತ್ಯೇಕ ಸ್ಥಳಾವಕಾಶ ಸೇರಿದಂತೆ ಮೆಟ್ರೋ ರೈಲಿನಲ್ಲಿ ಸಂಚರಿಸಿದ ಅನುಭವವಾಗಲಿದೆ,ಅತಿ ದೊಡ್ಡ ಗಾಜಿನ ಕಿಟಕಿಗಳಿಂದಾಗಿ ರೈಲು ಪ್ರಯಾಣಿಕರು ಪ್ರಾಕೃತಿಕ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ರೈಲ್ವೆ ಇಲಾಖೆಯ ಡಿಆರ್ ಎಂ ತ್ರಿಲೋಕ್  ಕೊಠಾರಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು