6:06 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

02/03/2023, 21:42

ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.
ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಮಾ.6ರಂದು ಸಿಎಂ ಗರಡಿಗೆ: ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಉಪಮೇಯರ್ ಪೂರ್ಣಿಮಾ, ಕಂಕನಾಡಿ ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ಲೀಲಾವತಿ, ಕಂಕನಾಡಿ ಗರಡಿ ಕ್ಷೇತ್ರದ ಮೊಕ್ತೇಸರರಾದ ಜಗದೀಪ್ ಡಿ. ಸುವರ್ಣ, ಕಿಶೋರ್ ಮಜಿಲ, ದಿನೇಶ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್‌ವೆಲ್, ವಸಂತ್ ಪೂಜಾರಿ, ಸ್ವಾಗತ ಸಮಿತಿ ಸದಸ್ಯ ಉಮೇಶ್ ಸಾಲ್ಯಾನ್, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು