12:33 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

02/03/2023, 21:42

ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.
ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಮಾ.6ರಂದು ಸಿಎಂ ಗರಡಿಗೆ: ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಉಪಮೇಯರ್ ಪೂರ್ಣಿಮಾ, ಕಂಕನಾಡಿ ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ಲೀಲಾವತಿ, ಕಂಕನಾಡಿ ಗರಡಿ ಕ್ಷೇತ್ರದ ಮೊಕ್ತೇಸರರಾದ ಜಗದೀಪ್ ಡಿ. ಸುವರ್ಣ, ಕಿಶೋರ್ ಮಜಿಲ, ದಿನೇಶ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್‌ವೆಲ್, ವಸಂತ್ ಪೂಜಾರಿ, ಸ್ವಾಗತ ಸಮಿತಿ ಸದಸ್ಯ ಉಮೇಶ್ ಸಾಲ್ಯಾನ್, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು