2:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

02/03/2023, 21:42

ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.
ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಮಾ.6ರಂದು ಸಿಎಂ ಗರಡಿಗೆ: ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಉಪಮೇಯರ್ ಪೂರ್ಣಿಮಾ, ಕಂಕನಾಡಿ ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ಲೀಲಾವತಿ, ಕಂಕನಾಡಿ ಗರಡಿ ಕ್ಷೇತ್ರದ ಮೊಕ್ತೇಸರರಾದ ಜಗದೀಪ್ ಡಿ. ಸುವರ್ಣ, ಕಿಶೋರ್ ಮಜಿಲ, ದಿನೇಶ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್‌ವೆಲ್, ವಸಂತ್ ಪೂಜಾರಿ, ಸ್ವಾಗತ ಸಮಿತಿ ಸದಸ್ಯ ಉಮೇಶ್ ಸಾಲ್ಯಾನ್, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು