1:38 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಬಡ್ತಿ: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ

20/09/2023, 15:36

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ ನೀಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಪಿಎಸ್‌ಐ ಬಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ.

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಐಎಸ್ಡಿಯ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್ಬಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ಬಿಗೆ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷ ಗಳಿಂದ ಬಾಕಿ ಉಳಿದಿದ್ದ ಎಎಸ್‌ಐಗಳಿಗೆ ಬಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು