11:27 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು