2:43 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು