2:58 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೇಂದ್ರದ ಮುಂದಿದೆ 2 ರೈಲು ಮಾರ್ಗ ಪ್ರಸ್ತಾವನೆ: ಶಾಸಕ ಸುನಿಲ್ ಕುಮಾರ್

29/06/2026, 20:22

ಕಾರ್ಕಳ(reporterkarnataka.com): ಉಡುಪಿ- ಕಾರ್ಕಳ- ಧರ್ಮಸ್ಥಳ- ಸಕಲೇಶಪುರ ಹಾಗೂ ಶಿವಮೊಗ್ಗ ಸಂಪರ್ಕಿಸುವ 2 ಹೊಸ ರೈಲು ಮಾರ್ಗದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಅರಣ್ಯ ಇಲಾಖೆ ಅನುಮತಿ ಹಾಗೂ ಜಾಗದ ಸಮತೋಲನ ನೋಡಿಕೊಂಡು ತಜ್ಞರು ವರದಿ ರಚಿಸಿ, ಯೋಜನೆ ಮುಂದಾಗುವ ಸಾಧ್ಯತೆಯಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಶಾಸಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕಾರ್ಕಳ ತಾಲೂಕಿನಲ್ಲಿ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಅಮೃತ್ ಯೋಜನೆಯಡಿ ಕಾರ್ಕಳ ಪುರಸಭೆಗೆ 125 ಕೋಟಿ ರೂ. ವೆಚ್ಚದಲ್ಲಿ ನೀರಿನ ಪೈಪ್‌ಲೈನ್ ಕಾಮಗಾರಿ ನಡೆದಿದೆ. ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಐದೂವರೆ ಕೋಟಿ ರೂ. ಮೀಸಲಿರಿಸಲಾಗಿದೆ. ಮಳೆಗಾಲ ಮುಗಿದ ಕೂಡಲೇ ರಸ್ತೆ ಕಾಮಗಾರಿ ಆರಂಭವಾಗಲಿದೆ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಪ್ರಾಧಿಕಾರದ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯಿಲ್ಲ. ಮೂರು ವರ್ಷಗಳಿಂದ ಸರ್ಕಾರ ಅಧಿಕಾರದಲ್ಲಿದ್ದರೂ ಸಮಸ್ಯೆ ಬಗೆಹರಿಸಿಲ್ಲ. ಇನ್ನು ಅಕ್ರಮ- ಸಕ್ರಮ ಹಾಗೂ ವಿವಿಧ ಭೂ ಅರ್ಜಿಗಳ ಕುರಿತು ಸರ್ಕಾರ ನೇಮಿಸಿರುವ ಸಮಿತಿ ಅಧಿಕಾರವನ್ನು ಮೊಟಕುಗೊಳಿಸಿರುವುದರಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಉಳಿದಿವೆ ಎಂದು ಆರೋಪಿಸಿದರು.

*ಜವಳಿ ಪಾರ್ಕ್ ನನೆಗುದಿಗೆ:*
ಬಜೆಟ್‌ನಲ್ಲಿ ಶಿಗ್ಗಾವಿ ಹಾಗೂ ಕಾರ್ಕಳಕ್ಕೆ ಜವಳಿ ಪಾರ್ಕ್ ಮಂಜೂರು ಮಾಡಲಾಗಿತ್ತು. ಡೀಮ್ಡ್ ಸಮಸ್ಯೆ ನಿವಾರಿಸಿ ನಿಟ್ಟೆಯಲ್ಲಿ ಜಾಗ ಗುರುತಿಸಲಾಯಿತು. ಆ ಬಳಿಕ ಬಂದ ಹೊಸ ಸರ್ಕಾರ ಸರ್ಕಾರ ಮೂಲಸೌಕರ್ಯ ಕಲ್ಪಿಸಿಕೊಡಲು ಪಿಪಿಪಿ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಸಲಹೆ ನೀಡಿದರು. ಮೂರು ಬಾರಿ ಟೆಂಡರ್ ಕರೆದರೂ ಪ್ರಯೋಜನವಾಗಿಲ್ಲ ಎಂದು ಸುನೀಲ್ ತಿಳಿಸಿದರು.

*ಥೀಮ್ ಪಾರ್ಕ್ ಚುನಾವಣೆ ಗಿಮಿಕ್:*
ಪರಶುರಾಮ ಥೀಮ್ ಪಾರ್ಕ್‌ನ ಇಂದಿನ ಈ ಸ್ಥಿತಿಗೆ ನೇರವಾಗಿ ಮುನಿಯಾಲು ಉದಯ ಕುವಾರ್ ಶೆಟ್ಟಿ ಕಾರಣ. ಪರಶುರಾಮ ಥೀಮ್ ಪಾರ್ಕ್ ನಮಗೆ ಪ್ರವಾಸೋದ್ಯಮ ವಸ್ತು, ಬಿಜೆಪಿಗೆ ಅದು ಚುನಾವಣಾ ವಸ್ತುವಲ್ಲ. ಕಾಂಗ್ರೆಸ್ಸಿಗೆ ಅದು ಚುನಾವಣಾ ವಸ್ತುವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ತಿಳಿಸಿದರು.
ಮೊದಲು ಹೆಸರು ಬದಲಾವಣೆ ಹುನ್ನಾರ ಆಯಿತು. ಇದೀಗ ಕಾರ್ಕಳದ ಯಕ್ಷಾ ರಂಗಾಯಣವನ್ನು ಜಿಲ್ಲಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ನಡೆಯುತ್ತಿದೆ. ನಮಗೆ ಯಕ್ಷಾ ರಂಗಾಯಣ ಬೇಕು. ಹಿಂದೆ ಕರಾವಳಿ ರಂಗಾಯಣ ಇತ್ತು ಎನ್ನುವುದಕ್ಕೆ ಒಂದು ಪುರಾವೆ ಕೊಡಲಿ. ಕರಾವಳಿ ಪ್ರಾದೇಶಿಕತೆಯ ಅಸ್ಮಿತೆ ಯಕ್ಷಗಾನ ಎಂದು ಅವರು ನುಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚೇರಿಪೇಟೆ, ಕೋಶಾಧಿಕಾರಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು