1:25 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾರ್ಯ ನಡೆಸಿದ ಆತ್ಮತೃಪ್ತಿ ನನಗಿದೆ: ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ

05/03/2023, 22:46

ಸುರತ್ಕಲ್(reporterkarnataka.com):
ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಮಿಕ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಅನುಷ್ಠಾನಗೊಳಿಸಿದ ಆತ್ಮತೃಪ್ತಿ ನನಗಿದೆ. ಈ ಸಾಧನೆ ಸಾಧಿಸಲು ಪಕ್ಷದ ಕಾರ್ಯಕರ್ತರ ಪ್ರೇರಣಾ ಶಕ್ತಿಯೇ ಕಾರಣವಾಗಿದೆ ಎಂದು ಶಾಸಕ ಡಾ ವೈ. ಭರತ್ ಶೆಟ್ಟಿ ಹೇಳಿದರು.
ಅವರು ಸುರತ್ಕಲ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಹಮ್ಮಿಕೊಂಡ ಕುಟುಂಬ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಂಗಳೂರು ಉತ್ತರ ಕ್ಷೇತ್ರಕ್ಕೆ ಇಷ್ಟು ಅನುದಾನ ತಂದ ಉದಾಹರಣೆ ಇಲ್ಲ. ಅಭಿವೃದ್ಧಿ, ಅನುದಾನದ ಬಗ್ಗೆ ಯಾವುದೇ ಚರ್ಚೆಗೂಸಿದ್ಧ ಎಂದ ಅವರು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಬಗ್ಗೆ ಟೀಕೆಗಳಿಗೆ ಯಾವುದೇ ಪುರಾವೆ ಇಲ್ಲ, ವ್ಯರ್ಥ ಅರೋಪಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದು ಐದು ವರ್ಷದ ಅಳ್ವಿಕೆ ನಡೆಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸುರತ್ಕಲ್ 1 ಮತ್ತು 2 ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ವಾರ್ಡುಗಳಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪಕ್ಷದ ಹಿರಿಯ ಕಾರ್ಯಕರ್ತರನ್ನು ಶಾಸಕರು ಸನ್ಮಾನಿಸಿದರು.

ಬಹಳ ಅರ್ಥಪೂರ್ಣವಾಗಿ ನಡೆದ ಈ ಕುಟುಂಬ ಮಿಲನ ಕಾರ್ಯಕ್ರಮ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿಯೂ ನಡೆಯಲಿದೆ.
ಮಂಗಳೂರು ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಚುನಾವಣಾ ಉಸ್ತುವಾರಿ ಕೃಷ್ಣಶೆಟ್ಟಿ ಕಡಬ, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ರಾಷ್ಟ್ರೀಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್, ಮಂಗಳೂರು ನಗರ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಸುರತ್ಕಲ್ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಮೂರ್ತಿ ಸುರತ್ಕಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಠಲ್ ಸಾಲ್ಯಾನ್ ಕುಳಾಯಿ, ಪ್ರಮುಖರಾದ ರಾಘವೇಂದ್ರ ಶಣೈ, ಮಂಡಲ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ವಸಂತ ಹೊಸ ಬೆಟ್ಟು, ಯುವಮೋರ್ಚಾದ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಮನಪಾ ಸದಸ್ಯರುಗಳಾದ ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷೀ ಶೇಖರ ದೇವಾಡಿಗ, ಸರಿತಾ ಶಶಿಧರ, ನಯನಾ ಕೋಟ್ಯಾನ್, ವರುಣ್ ಚೌಟ, ವೇದಾವತಿ, ಸುಮಿತ್ರ ಕರಿಯ , ಸುನೀತಾ , ಪ್ರಶಾಂತ ಮೂಡಾಯಿಕೊಡಿ,ರಾಜೇಶ್ ಬೈಕಂಪಾಡಿ, ಪ್ರಮುಖರಾದ ದಿನಕರ ಇಡ್ಯಾ,ತಿಲಕ್ ರಾಜ್ ಅಮೀನ್ ಕೃಷ್ಣಾಪುರ, ದಿವೇಸ್ ಪೂಜಾರಿ, ಸುನಿಲ್ ಕುಳಾಯಿ, ಮನೀಷ್ ಸುರತ್ಕಲ್, ಯೋಗೀಶ್ ಸನಿಲ್, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು