1:26 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

2 ಸಾವಿರ ವರ್ಷ ಇತಿಹಾಸವುಳ್ಳ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ: 10 ತಲೆಮಾರಿನ ಮಠ ಪರಂಪರೆ

14/10/2021, 13:52

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ರಾಜ್ಯದ ಪ್ರಸಿದ್ಧ ಶಿವ ದೇವಾಲಯಗಳಲ್ಲ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ನೆರವೇರಿಸುವ ಸೋಮಲಿಂಗ ಎಂದೇ ಇದು ನಾಡಿನುದ್ಧಗಲಕ್ಕೂ ಪ್ರಸಿದ್ಧಿ ಪಡೆದಿದೆ.

ದೇವಾಲಯದಲ್ಲಿ ಸೋಮೇಶ್ವರನಿಗೆ ನಿತ್ಯ ಪೂಜೆ ನಡೆಯುತ್ತದೆ. ಭಕ್ತರಿಗೆ ಅನ್ನದಾಸೋಹ ನೆರವೇರುತ್ತಿದೆ. ಮಠದಲ್ಲಿ ಭಕ್ತರಿಗೆ ಸ್ವಾಮೀಜಿ ಪ್ರತಿ ದಿನ ಸಂಜೆ ದರ್ಶನ ಕೊಡುತ್ತಾರೆ. ಹರಕೆ ಹೊತ್ತ ಭಕ್ತರು ಇಲ್ಲಿಗೆ ಬಂದು ಗುರುಗಳ ಪಾದಪೂಜೆ ನೆರವೇರಿಸುತ್ತಾರೆ.ದೇಗುಲ ಮಠ ಪರಂಪರೆಯನ್ನು ಹೊಂದಿದೆ.


10 ತಲೆಮಾರುಗಳ ಇತಿಹಾಸವಿರುವ ಮಠ ಪರಂಪರೆಯನ್ನು ದೇಗುಲ ಹೊಂದಿದೆ. ಈಗಿನ 11ನೇ ತಲೆಮಾರಿನ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಅವರು ಗುರುಪೀಠವನ್ನು ಅಲಂಕರಿಸಿದ್ದಾರೆ. 10 ತಲೆಮಾರಿನಿಂದ ಮಠದಲ್ಲಿ ನಡೆದುಕೊಂಡು ಬರುತ್ತಿರುವ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಚಾಚು ತಪ್ಪದೆ ಪಾಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಸಾರ ಪೀಠವಾದ ಇಲ್ಲಿನ ಮಠದ ದೇವೇಂದ್ರ ಒಡೆಯಾರ್ ಸ್ವಾಮೀಜಿ ದೇವರ ಮತ್ತು ಭಕ್ತರ ಇಷ್ಟಾರ್ಥಕ್ಕನುಗುಣವಾಗಿ ಮಠವನ್ನು ಮುನ್ನಡೆಸುತ್ತಿದ್ದಾರೆ.


ಸ್ವಾಮೀಜಿಯವರು ಸೋಮಲಿಂಗೇಶ್ವರನ ಅಪ್ಪಣೆಯಂತೆ ಅನಾಥರಿಗೆ ಆಶ್ರಮ ನಿರ್ಮಿಸಿದ್ದಾರೆ. ಅದರ ಜತೆಗೆ ಶಿವನ ಬೃಹತ್ ಲಿಂಗವನ್ನು ಪ್ರತಿಷ್ಠಾಪಿಸುವ ಸಂಕಲ್ಪ ಹೊಂದಿದ್ದಾರೆ. ಸುಮಾರು ಒಂದು ಎರಕೆ ಪ್ರದೇಶದಲ್ಲಿ 108 ಅಡಿ ಎತ್ತರದ ಬೃಹತ್ ಶಿವಲಿಂಗ ತಲೆ ಎತ್ತಿ ಇಡೀ ವಿಜಯಪುರ ಜಿಲ್ಲೆ ಮಾತ್ರವೇಕೆ ಇಡೀ ರಾಜ್ಯವನ್ನು ಪಾವನಗೊಳಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು