4:57 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

2 ತಿಂಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಜಯ; ನಾರಾಯಣಗುರು ಪಠ್ಯ ಮರು ಸೇರ್ಪಡೆಗೆ ಕೇಂದ್ರ ಮಾಜಿ ಸಚಿವ ಪೂಜಾರಿ ಹರ್ಷ

14/07/2022, 22:14

ಮಂಗಳೂರು(reporterkarnataka.com):ನಾರಾಯಣಗುರುಗಳ ಅನುಯಾಯಿಗಳು, ಬಿಲ್ಲವ ಸಮುದಾಯದವರು ಸಂಘಟಿತರಾಗಿ 2 ತಿಂಗಳಿಂದ ನಡೆಸುತ್ತಿದ್ದ ಹೋರಾಟದ ಫಲವಾಗಿ 10ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತ ಪಠ್ಯ ಮತ್ತೆ ಸೇರ್ಪಡೆಗೊಂಡಿದೆ ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಜತೆ ಗುರುವಾರ ಚರ್ಚಿಸಿದ ಅವರು, ಸಮಾಜದಲ್ಲಿ ಅನ್ಯಾಯ ಎದುರಿಸಿ ನಿಲ್ಲುವಲ್ಲಿ ಎಲ್ಲರೂ ಸಂಘಟಿತರಾದರೆ ಜಯ ಸಾಧ್ಯ. ಬ್ರಹ್ಮಶ್ರೀ ನಾರಾಯಣಗುರುಗಳೂ ನಮ್ಮ ಹೋರಾಟದ ಹಿಂದೆ ಇರುತ್ತಾರೆ ಎನ್ನುವುದಕ್ಕೆ ಇದು ನಿದರ್ಶನ ಎಂದರು. 


ಹೋರಾಟದಲ್ಲಿ ಪಾಲ್ಗೊಂಡ ನಾರಾಯಣ ಗುರುಗಳ ಅನುಯಯಾಯಿಗಳು, ಬಿಲ್ಲವ ಸಮುದಾಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ನಾರಾಯಣ ಗುರುಗಳ ತತ್ವದಂತೆ ಮುಂದೆಯೂ ಸಮಾಜ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘರ್ಷರಹಿತವಾಗಿ, ಪಕ್ಷಭೇದ ಮರೆತು ಹೋರಾಟ ನಡೆಸುವಂತೆ ಮಾರ್ಗದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು