2:46 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು