2:33 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು