3:25 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಟ್ವೆಂಟಿ-20 ವಿಶ್ವಕಪ್ ಸೂಪರ್ -12 ಪಂದ್ಯ: ಪಾಕಿಗೆ ಭಾರತದ ವಿರುದ್ಧ 10 ವಿಕೆಟ್ ಗಳ ಗೆಲುವು 

25/10/2021, 00:07

ದುಬೈ(reporterkarnataka.com): ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ (ಔಟಾಗದೆ 68)ಹಾಗೂ ಮುಹಮ್ಮದ್ ರಿಝ್ವಾನ್ (ಔಟಾಗದೆ 78) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.  

ಟ್ವೆಂಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕ್ ಮೊದಲ ಬಾರಿ ಗೆಲುವಿನ ನಗೆ ಬೀರಿತು.

ಬಾಬರ್ ಆಝಂ ಹಾಗೂ ರಿಝ್ವಾನ್ ಪಾಕಿಸ್ತಾನ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಆಝಂ 40 ಎಸೆತಗಳಲ್ಲಿ(4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.)ಅರ್ಧಶತಕಗಳನ್ನು ಪೂರೈಸಿದರು.

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್  ಮಾಡಿದ ಭಾರತವು ಪವರ್ ಪ್ಲೇ ವೇಳೆ ಅಗ್ರ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು