5:33 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಟ್ವೆಂಟಿ-20 ವಿಶ್ವಕಪ್ ಸೂಪರ್ -12 ಪಂದ್ಯ: ಪಾಕಿಗೆ ಭಾರತದ ವಿರುದ್ಧ 10 ವಿಕೆಟ್ ಗಳ ಗೆಲುವು 

25/10/2021, 00:07

ದುಬೈ(reporterkarnataka.com): ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ (ಔಟಾಗದೆ 68)ಹಾಗೂ ಮುಹಮ್ಮದ್ ರಿಝ್ವಾನ್ (ಔಟಾಗದೆ 78) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.  

ಟ್ವೆಂಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕ್ ಮೊದಲ ಬಾರಿ ಗೆಲುವಿನ ನಗೆ ಬೀರಿತು.

ಬಾಬರ್ ಆಝಂ ಹಾಗೂ ರಿಝ್ವಾನ್ ಪಾಕಿಸ್ತಾನ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಆಝಂ 40 ಎಸೆತಗಳಲ್ಲಿ(4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.)ಅರ್ಧಶತಕಗಳನ್ನು ಪೂರೈಸಿದರು.

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್  ಮಾಡಿದ ಭಾರತವು ಪವರ್ ಪ್ಲೇ ವೇಳೆ ಅಗ್ರ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು