10:21 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು