2:47 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು