6:04 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು