5:29 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

200 ಕೆಜಿ ಗಾಂಜಾ ವಶ: 4 ಮಂದಿ ಆರೋಪಿಗಳ ಬಂಧನ, 2 ವಾಹನ, ಮಾರಕಾಸ್ತ್ರ ಪೊಲೀಸ್ ವಶ

27/05/2021, 07:24

ಮಂಗಳೂರು(reporterkarnataka news):

ಕೇರಳ ಹಾಗೂ ಕರ್ನಾಟಕ ವಿವಿಧ ಕಡೆ ಪೂರೈಸಲು ಸಾಗಿಸಲಾಗುತ್ತಿದ್ದ ಸುಮಾರು 200 ಕೆಜಿ ಗಾಂಜಾದೊಂದಿಗೆ ನಾಲ್ಕರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮುಹಮ್ಮದ್ ಫಾರೂಕ್ (24), ಕುಶಾಲನಗರದ ಸಯ್ಯದ್ ಮುಹಮ್ಮದ್ (31), – ಮಂಗಳೂರು ಮುಡಿಪುವಿನ ಮುಹಮ್ಮದ್ ಅನ್ಸಾರ್ (23), ಮಂಜೇಶ್ವರದ ಮೊಯಿನ್ ನವಾಝ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ವಾಹನ, 3 ತಲವಾರು, 1 ಚಾಕು, 4 ಮೊಬೈಲ್, 1 ವೈಫೈ ಸೆಟ್ಗಳನ್ನು ಸ್ವಾಧೀನಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಮೂಡಬಿದ್ರೆ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದ ವೇಳೆ ಆರೋಪಿಗಳು ಸಾಕಷ್ಟು ಮಂದಿ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರದವರೆಂದು ತನಿಖೆಯಿಂದ ತಿಳಿದು ಬಂದಿತ್ತು. ತನಿಖೆ ನಡೆಸುತ್ತಿದ್ದ ಮೂಡಬಿದ್ರೆ ಠಾಣಾ ಪಿಎಸ್ಐ ಸುದೀಮ್ ಮತ್ತು ಸಿಬ್ಬಂದಿಗೆ ಅಂಧ್ರ ಪ್ರದೇಶದ ವಿಶಾಖಪಟ್ಟಣಂ ನ ಗ್ರಾಮವೊಂದರಿಂದ ಮಂಗಳೂರು ಹಾಗೂ ಕಾಸರಗೋಡು ಭಾಗಕ್ಕೆ ಗಾಂಜಾ ಸರಬರಾಜು ಮಾಹಿತಿ ದೊರಕಿತ್ತು.

ಅದರಂತೆ ಮಾಹಿತಿಯನ್ನು ಕಲೆ ಹಾಕುತ್ತಿದ್ದ ತಂಡಕ್ಕೆ ಈ ಗಾಂಜಾವನ್ನು ಹಾಸನ ಭಾಗದಿಂದ ಮಂಗಳೂರಿಗೆ ತರಲಾಗುತ್ತಿದೆ ಎಂಬ ಮಾಹಿತಿಯೂ ದೊರಕಿತ್ತು ಇದರಂತೆ ಪ್ರಕರಣದ ಬೆನ್ನು ಹತ್ತಿದ ಮೂಡಬಿದ್ರೆ ಠಾಣಾ ಪೊಲೀಸರಿಗೆ ನಗರದ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿರೋಡ್ ಸಮೀಪದ ಒಲವಿನಹಳ್ಳಿ ಕ್ರಾಸ್ ಬಳಿ ತಪಾಸಣೆಯ ಸಂದರ್ಭ ಮೀನು ಸಾಗಾಟದ ಲಾರಿ ಹಾಗೂ ಕಾರೊಂದರಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ. ಎಸಿಪಿ ರಂಜಿತ್ ಹಾಗೂ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ವಾಹನ ಪರಿಶೀಲಿಸಿದಾಗ 200 ಕೆಜಿಯಷ್ಟು ಗಾಂಜಾ ಪತ್ತೆಯಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು