12:30 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

200 ಕೆಜಿ ಗಾಂಜಾ ವಶ: 4 ಮಂದಿ ಆರೋಪಿಗಳ ಬಂಧನ, 2 ವಾಹನ, ಮಾರಕಾಸ್ತ್ರ ಪೊಲೀಸ್ ವಶ

27/05/2021, 07:24

ಮಂಗಳೂರು(reporterkarnataka news):

ಕೇರಳ ಹಾಗೂ ಕರ್ನಾಟಕ ವಿವಿಧ ಕಡೆ ಪೂರೈಸಲು ಸಾಗಿಸಲಾಗುತ್ತಿದ್ದ ಸುಮಾರು 200 ಕೆಜಿ ಗಾಂಜಾದೊಂದಿಗೆ ನಾಲ್ಕರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮುಹಮ್ಮದ್ ಫಾರೂಕ್ (24), ಕುಶಾಲನಗರದ ಸಯ್ಯದ್ ಮುಹಮ್ಮದ್ (31), – ಮಂಗಳೂರು ಮುಡಿಪುವಿನ ಮುಹಮ್ಮದ್ ಅನ್ಸಾರ್ (23), ಮಂಜೇಶ್ವರದ ಮೊಯಿನ್ ನವಾಝ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ವಾಹನ, 3 ತಲವಾರು, 1 ಚಾಕು, 4 ಮೊಬೈಲ್, 1 ವೈಫೈ ಸೆಟ್ಗಳನ್ನು ಸ್ವಾಧೀನಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಮೂಡಬಿದ್ರೆ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದ ವೇಳೆ ಆರೋಪಿಗಳು ಸಾಕಷ್ಟು ಮಂದಿ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರದವರೆಂದು ತನಿಖೆಯಿಂದ ತಿಳಿದು ಬಂದಿತ್ತು. ತನಿಖೆ ನಡೆಸುತ್ತಿದ್ದ ಮೂಡಬಿದ್ರೆ ಠಾಣಾ ಪಿಎಸ್ಐ ಸುದೀಮ್ ಮತ್ತು ಸಿಬ್ಬಂದಿಗೆ ಅಂಧ್ರ ಪ್ರದೇಶದ ವಿಶಾಖಪಟ್ಟಣಂ ನ ಗ್ರಾಮವೊಂದರಿಂದ ಮಂಗಳೂರು ಹಾಗೂ ಕಾಸರಗೋಡು ಭಾಗಕ್ಕೆ ಗಾಂಜಾ ಸರಬರಾಜು ಮಾಹಿತಿ ದೊರಕಿತ್ತು.

ಅದರಂತೆ ಮಾಹಿತಿಯನ್ನು ಕಲೆ ಹಾಕುತ್ತಿದ್ದ ತಂಡಕ್ಕೆ ಈ ಗಾಂಜಾವನ್ನು ಹಾಸನ ಭಾಗದಿಂದ ಮಂಗಳೂರಿಗೆ ತರಲಾಗುತ್ತಿದೆ ಎಂಬ ಮಾಹಿತಿಯೂ ದೊರಕಿತ್ತು ಇದರಂತೆ ಪ್ರಕರಣದ ಬೆನ್ನು ಹತ್ತಿದ ಮೂಡಬಿದ್ರೆ ಠಾಣಾ ಪೊಲೀಸರಿಗೆ ನಗರದ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿರೋಡ್ ಸಮೀಪದ ಒಲವಿನಹಳ್ಳಿ ಕ್ರಾಸ್ ಬಳಿ ತಪಾಸಣೆಯ ಸಂದರ್ಭ ಮೀನು ಸಾಗಾಟದ ಲಾರಿ ಹಾಗೂ ಕಾರೊಂದರಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ. ಎಸಿಪಿ ರಂಜಿತ್ ಹಾಗೂ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ವಾಹನ ಪರಿಶೀಲಿಸಿದಾಗ 200 ಕೆಜಿಯಷ್ಟು ಗಾಂಜಾ ಪತ್ತೆಯಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು