7:51 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

50 ಲಕ್ಷ ರೂ. ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಡಿಸಿಎಂ ಲಕ್ಷ್ಮಣ ಸವದಿ

13/05/2021, 15:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ  ಆಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೊರೋನ ಮಹಾಮಾರಿಯಿಂದ ಹೊರಗಡೆ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50  ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು  ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಆಕ್ಸಿಜನ್  ಕಾನ್ಸಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚು ರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಉಳ್ಳ ಕಿಟ್ ಗಳನ್ನು ಕೂಡ ನೀಡಲಾಗುತ್ತಿದೆ.

ಕೋವಿಡ್ ಅಂತ ಮಹಾಮಾರಿ ಇಂದಾಗಿ ಅಥಣಿಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧೋಪಚಾರಗಳು ಸಿಗದೆ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವ ಜನತೆಗೆ ಸುಸಜ್ಜಿತ   ಆಕ್ಸಿಜನ್  ಕಾನ್ಸಟ್ರೇಟರ್  ಹಾಗೂ ಬೆಡ್ ನೀಡುವ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವ ಮುಖೇನ ಅಳಿಲು ಸೇವೆ ಮಾಡುತ್ತಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೋರೋನ ಬಂದಿದೆ ಎಂದು  ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರು ಧೈರ್ಯಗೆಡಬಾರದು, ಭಯದಿಂದಾಗಿಯೇ ಅನೇಕ ಜನ ಜೀವ ತೆತ್ತಿರುವ ಉದಾಹರಣೆ ನಮ್ಮ ಕಣ್ಣಮುಂದಿದೆ  ಇದರಿಂದಾಗಿ ಜನತೆ ತಮ್ಮ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು