1:54 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್: ನಳಿನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

13/05/2021, 15:34

ಬೆಂಗಳೂರು(reporterkarnataka news):

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು. 

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೂರು ವೆಂಟಿಲೇಟರ್ ಗಳ ಅವಶ್ಯಕತೆ ಇರುವುದನ್ನು ತಿಳಿಸಿದರು. ನಳಿನ್ ಕುಮಾರ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ವೆಂಟಿಲೇಟರ್ ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಕೋವಿಡ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಕೋವಿಡ್ ನಿಯಮಗಳು ಮತ್ತು ವ್ಯವಸ್ಥೆಗಳ ಜೊತೆಗೆ ಜನಸಾಮಾನ್ಯರ ಜವಾಬ್ದಾರಿಯೂ ಅತೀ ಮುಖ್ಯವಾಗಿ ಇರುವುದರಿಂದ, ರಾಜ್ಯದ ಜನತೆ ಸರ್ಕಾರದ ಜೊತೆಗೆ ಕೈಜೋಡಿಸಿ, ಸಹಕರಿಸುವಂತೆ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಮೂಲಕ ಜನತೆಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು