6:59 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು