6:00 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು