12:49 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ  ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು

17/05/2021, 18:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka news@gmail.com

ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ  ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ.  


ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳಂಬೆಳಗ್ಗೆ ಬೀದಿಗಿಳಿದ ಪೊಲೀಸ್ ಸಿಪಿಐ ದೀಪಕ್ ಬೋಸು ರೆಡ್ಡಿ, ಪಿಎಸ್ಐ ಸಿದ್ದರಾಮ ಬಿದರಾಣಿ ನೇತೃತ್ವದಲ್ಲಿ ಪೊಲೀಸರು  ಮತ್ತು ಪುರಸಭೆ ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಕೋವಿಡ್ ನಿಯಮ ಉಲ್ಲಂಘಿಸಿ ರಸ್ತೆಗೆ ಬಂದ ವಾಹನ ಸವಾರರಿಗೆ ಹಾಗೂ ಅಂಗಡಿಗಳನ್ನು ತೆರೆದಿದ್ದ ಮಾಲೀಕರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಎಲ್ಲ ರಸ್ತೆಗಳನ್ನು ಲಾಕ್ ಮಾಡಲಾಗಿತ್ತು. ಕೆಲವೊಂದು ಕಡೆ ಸಾರ್ವಜನಿಕರು ಬಾರಿ ಗೇಟುಗಳನ್ನು ಕಿತ್ತುಹಾಕಿದರು. ಜನರು ವಾಹನ ಚಲಾಯಿಸಿಕೊಂಡು ಹೋಗುವುದು ಕಂಡುಬಂದಿತ್ತು. ಅಂತವರಿಗೆ ಪೊಲೀಸರು ಎಚ್ಚರಿಕೆ ನೀಡಿ ಮರಳಿ ಮನೆಗೆ ಹೋಗುವಂತೆ ಕಳಿಸಿದರು. ಪಟ್ಟಣದ ಮುಖ್ಯರಸ್ತೆಗಳಲ್ಲಿ ಅಶೋಕ ವೃತ್ತ, ಕನಕ ವೃತ್ತ, ವಾಲ್ಮೀಕಿ ವೃತ್ತ, ಮೇನ್ ಬಜಾರ್ ಸೇರಿದಂತೆ ಎಲ್ಲ ರಸ್ತೆಗಳು ಜನ ಇಲ್ಲದೆ ಬಿಕೋ ಎನ್ನುವ ದೃಶ್ಯ ಕಂಡುಬಂತು. ಅಲ್ಲೊಂದು ಇಲ್ಲೊಂದು ಅಲ್ಲೊಂದು ಇಲ್ಲೊಂದು ವಾಹನ ತಿರುಗಾಡುತ್ತಿ ಕಂಡುಬಂದಿತ್ತು. ಅಂತಹ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ದಂಡ ಹಾಕಿ ಕಳಿಸುವ ದೃಶ್ಯ ಕಂಡು ಬಂತು. ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ನೇತೃತ್ವದಲ್ಲಿ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ  ಲಾಕ್ ಡೌನ್ ಇದ್ದು ಅಂಗಡಿಗಳನ್ನು ತೆರೆಯದಂತೆ ಮನವಿ ಮಾಡುವುದು ಕಂಡುಬಂದಿತ್ತು ಮಸ್ಕಿ ಕ್ಷೇತ್ರದ ಮೆದಿಕಿನಾಳ ಅಂತರಗಂಗೆ ನಾಗರಬೆಂಚಿ ಮಸ್ಕಿ ತಾಂಡಾ ಸೇರಿದಂತೆ ಜನ ಗುಂಪು ಗುಂಪು ಕೊಡುವುದನ್ನು ಬಿಡಬೇಕೆಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದರು ತಸಿಲ್ದಾರ್ ಬಲರಾಮ್ ಕಟ್ಟಿಮನಿ ಸಿಪಿಐ ದೀಪಕ್ ಬೋಸರಾಜ್ ಪಿಎಸ್ಐ ಸಿದ್ದರಾಮ ಬಿದರಾಣಿ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ್ ಸೇರಿದಂತೆ ಇನ್ನಿತರ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ದೃಶ್ಯ ಕಂಡುಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು