7:44 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು