10:07 AM Friday29 - March 2024
ಬ್ರೇಕಿಂಗ್ ನ್ಯೂಸ್
ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ…

ಇತ್ತೀಚಿನ ಸುದ್ದಿ

ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್  ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ

19/05/2021, 11:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮೇ 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ದಿನಾಂಕ: 19-05-2021 ಮದ್ಯಾಹ್ನ 12-00 ಗಂಟೆಯಿಂದ 22-05-2021ರಂದು ರಾತ್ರಿ 12.00 ಗಂಟೆವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

19ರಂದು ಬೆಳಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಅಗತ್ಯ ವಸ್ತುಗಳಾದ ನೀರು, ಹಾಲು, ಹಣ್ಣು, ಕಿರಾಣಿ ಅಂಗಡಿ, ತರಕಾರಿ, ಮಾಂಸ ಮಾರಾಟ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಸಹಕರಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು