8:09 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ:  ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್

20/05/2021, 12:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ  ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಧ್ವನಿ ಸುರುಳಿಯ ಸಣ್ಣ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಸ್ಕಿ ಕ್ಷೇತ್ರದ ಮಾಜಿ ಶಾಸಕರ ಪ್ರತಾಪ ಗೌಡ ಪಾಟೀಲ್ ಅಭಿಮಾನಿಗಳು ಮುಖ್ಯಮಂತ್ರಿಯನ್ನು ಆಗ್ರಹಿಸುವ ಧ್ವನಿ ಸುರುಳಿ ಇದಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರೇ ಇವತ್ತು ನೀವು ಸಿಎಂ ಕುರ್ಚಿ ಮೇಲೆ ಕೂರುವುದಕ್ಕೆ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪ ಗೌಡರ ಪಾತ್ರ ಬಹುಮುಖ್ಯ. ಉಪಚುನಾವಣೆಯಲ್ಲಿ ಅವರು ಸೋತಿರಬಹುದು. ಆದರೆ ನೀವು ಸೋತವರನ್ನು ಸಚಿವರನ್ನಾಗಿ ಮಾಡಿದ್ದೀರಿ. ಅಲ್ಲದೆ ಉಪಮುಖ್ಯಮಂತ್ರಿ ಕೂಡ ಮಾಡಿದ್ದೀರಿ. ಪ್ರತಾಪಗೌಡ ಪಾಟೀಲ್ ಅವರನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಕೇಳಿಬರುತ್ತಿದೆ. ಮತದಾರರು ಈ ಸಲ ಪ್ರತಾಪ ಗೌಡರನ್ನು ಕೈ ಬಿಟ್ಟಿರಬಹುದು. ಆದರೆ ಸರಕಾರ ತರುವುದರಲ್ಲಿ ಅವರ ಪಾತ್ರ ಬಹಳ ಮುಖ್ಯ. 17 ಜನರಲ್ಲಿ ಇವರದು ಒಂದು ಪಾತ್ರ ಇದೆ. ಮೈತ್ರಿ ಸರಕಾರ ಬೀಳಿಸುವಲ್ಲಿ ಇದ್ದ 17 ಜನರಲ್ಲಿ ಇವರು ಒಬ್ಬರು. ಪ್ರತಾಪ್ ಗೌಡ ಪಾಟೀಲ್ 

ಅವರನ್ನು ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ನಾವು ಎಲ್ಲಿ ಎಡವಿದ್ದೇವೆ, ತಪ್ಪು ಮಾಡಿದ್ದೇವೆ ಇದನ್ನೆಲ್ಲ ಮುಂಬರುವ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ಮುಂಬರುವ ದಿನಗಳಲ್ಲಿ ನಾವು ಸರಿಪಡಿಸಿಕೊಳ್ಳುತ್ತೇವೆ. ಅಲ್ಲದೆ ಮುಖ್ಯಮಂತ್ರಿಗಳು ನಮ್ಮನ್ನು ಕೈಬಿಡುವುದಿಲ್ಲ ಎನ್ನುವ ಮಾತುಗಳು ಅಭಿಮಾನಿಗಳಿಂದ ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು