2:38 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು