1:21 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್‌ಬುಕ್‌, ಟ್ವಿಟರ್‌,  ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? 

25/05/2021, 19:01

ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್‌ಬುಕ್‌ , ಟ್ವಿಟರ್‌, ಇನ್‌ಸ್ಟಾಗ್ರಾಮ್‌ ಮುಂತಾದ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ. ಇದರ ಪರಿಣಾಮ ಈ ಜಾಲತಾಣಗಳ ಸೇವೆ ಸ್ಥಗಿತವಾಗುವ ಅಪಾಯವೂ ಇದೆ ಎಂದು ತಿಳಿದು ಬಂದಿದೆ.

ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸರಕಾರ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿ ನೀತಿ ಸಂಹಿತೆ ರೂಪಿಸಿತ್ತು. ಅದರ ಜಾರಿಗೆ ಮೂರು ತಿಂಗಳಿನ ಗಡುವು ನೀಡಿತ್ತು. ಇದೀಗ ಗಡುವು ಮುಕ್ತಾಯವಾಗುತ್ತಿದ್ದು, ನಿಯಮಗಳನ್ನು ಪಾಲಿಸದಿದ್ದರೆ, ಭಾರತದಲ್ಲಿ ಅಂಥ ಸಂಸ್ಥೆಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ. ಅವುಗಳ ವಿರುದ್ಧ ಕ್ರಿಮಿನಲ್‌ ವಿಚಾರಣೆಯೂ ನಡೆಯಬಹುದು. 

ಸಾಮಾಜಿಕ ಜಾಲತಾಣ ಕಂಪನಿ ‘ಕೂ’ ಹೊರತುಪಡಿಸಿ ಮಿಕ್ಕಿದ ಪ್ರಮುಖ ಜಾಲತಾಣಗಳು ನಿಯಮಾನುಸಾರ ಸ್ಥಳೀಯ ಅಹವಾಲು ಅಧಿಕಾರಿಯನ್ನು ನೇಮಕ ಮಾಡಿಲ್ಲ. ಹೊಸ ಕಾನೂನು ಪ್ರಕಾರ ರಕ್ಷಣೆ, ವಿದೇಶಾಂಗ, ಗೃಹ, ಕಾನೂನು, ವಾರ್ತಾ ಮತ್ತು ಪ್ರಸಾರ, ಐಟಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯು ನೀತಿ ಸಂಹಿತೆ ಜಾರಿಯ ಮೇಲುಸ್ತುವಾರಿ ವಹಿಸಲಿದೆ. 

ನಿಯಮಗಳು ಉಲ್ಲಂಘನೆಯಾದರೆ ಈ ಸಮಿತಿ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ. ಜಂಟಿ ಕಾರ್ಯದರ್ಶಿ ಅಥವಾ ಮೇಲ್ಮಟ್ಟದ ಅಧಿಕಾರಿ ನಿಯುಕ್ತಿಯಾಗಲಿದ್ದು, ಅವರು ಕಾನೂನು ಉಲ್ಲಂಘನೆಯಾದ ಪಕ್ಷದಲ್ಲಿ ಜಾಲತಾಣಗಳ ವಿಷಯಗಳನ್ನು ಬ್ಲಾಕ್‌ ಮಾಡಲು ನೇರವಾಗಿ ಸೂಚಿಸಬಹುದು. 

ಇತ್ತೀಚಿನ ಸುದ್ದಿ

ಜಾಹೀರಾತು