10:22 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಜಿಲ್ಲಾಧಿಕಾರಿ ಭೇಟಿ: ಪಡಿತರ ವ್ಯವಸ್ಥೆ, ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ

26/05/2021, 19:21

ಮಂಗಳೂರು(reporterkarnataka news): ನಗರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳನ್ನು ಬುಧವಾರ ಭೇಟಿಯಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಮುದಾಯದ ಜನರಿಗೆ ಪಡಿತರ ಹಾಗೂ ಔಷಧೋಪಚಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಹಲವು ಸಮಸ್ಯೆಗಳನ್ನು ಅನುಭವಿಸಿತ್ತು. ಇದಲ್ಲದೆ ಕೊರೊನಾ ಲಾಕ್ಡೌನ್ ನಿಂದಾಗಿ ಒಂದೊತ್ತಿನ ಊಟಕ್ಕೂ ಪಡಿತರ ಇಲ್ಲದೆ ಪರದಾಡುವಂತಾಗಿದೆ.

 ಈ ಸಮುದಾಯಕ್ಕೆ ಆಹಾರ ಸಾಮಗ್ರಿ ಸಹಿತ ಆರ್ಥಿಕ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಡಿವೈಎಫ್ ಐ ಒತ್ತಾಯಿಸಲಾಗಿತ್ತು. ಈ ಬಗ್ಗೆ ಗಮನಹರಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಹೊಯಿಗೆಬಜಾರಿನ ಶಿಳ್ಳೆಕ್ಯಾತ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಕ್ಯಾಂಪ್ ಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಶಿಳ್ಳೆಕ್ಯಾತ ಕುಟುಂಬಗಳಿಗೆ ಬೇಕಾಗಿರುವ ಪಡಿತರ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಡಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅದೇ ರೀತಿ ಸೊಳ್ಳೆ ಪರದೆಗಳನ್ನು ವಿತರಿಸಲು ಹಾಗೂ ಎಲ್ಲರ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದರು. ವಸತಿ, ವಿದ್ಯುತ್, ದಾರಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. 


ಈ ವೇಳೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ , ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷರು ಸಂತೋಷ್ ಬಜಾಲ್ , ಅಲೆಮಾರಿ ನಿಗಮದ ಅಧಿಕಾರಿ ಸೋಮಪ್ಪ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು