5:23 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ  ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್

26/05/2021, 07:17

ನವದೆಹಲಿ(reporterkarnataka news):  ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು  ‘ಸೂಪರ್‌ಮೂನ್‌’  ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. 

ಚಂದ್ರ ಅಂದು ಭೂಮಿಯಿಂದ ಅತೀ ಸಮೀಪದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಚಂದ್ರ ಸಾಮಾನ್ಯಕ್ಕಿಂತಲೂ ಹೆಚ್ಚು ದೊಡ್ಡದಾಗಿ ಕಾಣಿಸುತ್ತಾನೆ. ಚಂದ್ರನನ್ನು ಭೂಮಿಯ ನೆರಳು ಸಂಪೂರ್ಣವಾಗಿ ಆವರಿಸಿಕೊಳ್ಳುವುದರಿಂದ ಅಂದು ಗ್ರಹಣ ಕೂಡ ಸಂಭವಿಸಲಿದೆ. ಆದರೆ ಚಂದ್ರ ಸಂಪೂರ್ಣ ಕಪ್ಪಗಾಗುವುದಿಲ್ಲ. ಬದಲಾಗಿ, ಕೆಂಪು ಬಣ್ಣ ಕಾಣಿಸಿಕೊಳ್ಳುತ್ತದೆ. ಆದ್ದರಿಂದ, ಸಂಪೂರ್ಣ ಚಂದ್ರ ಗ್ರಹಣವನ್ನು ಕೆಂಪು ಅಥವಾ ರಕ್ತ ಚಂದ್ರ ಎಂದು ಕರೆಯಲಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆಸ್ಟ್ರೇಲಿಯಾ, ಜಪಾನ್‌, ಅಮೆರಿಕ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ‘ಸೂಪರ್‌ಮೂನ್‌’ ದರ್ಶನವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು