3:49 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು