7:47 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು

27/05/2021, 23:46

ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್  ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದು, ಇದರಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಮದುವೆಯಲ್ಲಿ ಗ್ರಾಮದ ಮತ್ತು ಹೊರ ಭಾಗದ. ಹಲವು ಮಂದಿ  ಭಾಗವಹಿಸಿದ್ದಾರೆ. ಇವರಲ್ಲಿ ಕೊರೊನಾ ಸೋಂಕಿತರು ಕೂಡ ಇದ್ದರು ಎನ್ನಲಾಗಿದೆ. ಪಾವೂರು ಗ್ರಾಮದ ವ್ಯಕ್ತಿಯ ಹೆಸರಿನಲ್ಲಿ ಮದುವೆಯ ಅನುಮತಿಯನ್ನು ಪಡೆದು ಪರವೂರಿನ ಜೋಡಿಯನ್ನು ತಂದು ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ್ದು, ಈ ಮದುವೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರು ಭಾಗಿಯಾಗಿರುತ್ತಾರೆ, ಇದು ಅಲ್ಲದೆ ಹಲವಾರು ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ವೇಲೇರಿಯನ್ ಡಿಸೋಜ ಅವರು ಗ್ರಾಮದ ಹಲವಾರು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇವರ ಇಂತಹ ಬೇಜವಾಬ್ದಾರಿತನದಿಂದ ಪಾವೂರು ಗ್ರಾಮದಲ್ಲಿ ಕೊರೊನಾ ಹರಡುವ ಭೀತಿ ಉಂಟಾಗಿದೆ. ಈ ಕಾರ್ಯಕ್ರಮದ ನಂತರ ಈ ಊರಿನಲ್ಲಿ ಹಲವಾರು ಜನರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರು ಭಯಭೀತಗೊಂಡಿದ್ದಾರೆ. ಇವರನ್ನು ಕೊರೊನಾ

 ಪರೀಕ್ಷೆ ಮಾಡಿಸಬೇಡಿ ಎಂದು ಸ್ವತಃ ಟಾಸ್ಕ್ ಫೋರ್ಸ್ ಸದಸ್ಯರೇ ಮನವಿ ಮಾಡಿರುವ ಬಗ್ಗೆ ಮಾಹಿತಿ ಇದೆ.  ಪರೀಕ್ಷೆಗೆ ಒಳಪಡದ ಜನರು ರಾಜಾರೋಷವಾಗಿ ಗ್ರಾಮದಲ್ಲಿ ತಿರುಗುತ್ತಿದ್ದಾರೆ. ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಇದೆಲ್ಲಾ ಗೊತ್ತಿದ್ದೂ ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು  ಮತ್ತು ಉಪಾಧ್ಯಕ್ಷರು ಜಾಣಕುರುಡು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು