8:43 PM Thursday25 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು