9:08 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಸಾಲ ಕಂತು ಮರು ಪಾವತಿಗೆ ಒತ್ತಡ ಹೇರಿದರೆ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ನೋಡೆಲ್ ಅಧಿಕಾರಿಗಳ ನೇಮಕ

28/05/2021, 12:06

ಮಂಗಳೂರು(reporterkarnataka news) : ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಖಡಕ್ ಆದೇಶ ನೀಡಿದ್ದಾರೆ.

ಲಾಕ್ ಡೌನ್ ನಿಂದ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಸಾಲದ ಕಂತು ಮರು ಪಾವತಿಸಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು, ಫೈನಾನ್ಸ್ ಗಳು, ಮೈಕ್ರೋ ಫೈನಾನ್ಸ್ ಗಳು ಸಾಲದ ಕಂತು ಪಾವತಿಸುವಂತೆ ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಾಲ ನೀಡಿರುವ ಯಾವುದೇ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ಮರು ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆ ಸಂಸ್ಥೆಗಳ ವಿರುದ್ಧ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಮೈಕ್ರೋ ಫೈನಾನ್ಸ್ಗ್ ಗಳು ಹಾಗೂ ಸಹಕಾರಿ ಸಂಸ್ಥೆಗಳು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ದೂರು ನೀಡಲು ಸಹಕಾರಿ ಸಂಘಗಳ ಉಪ ನಿಬಂಧಕರಾದ ಪ್ರವೀಣ್.ಬಿ ನಾಯಕ್ (944863338) ಇವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಇನ್ನುಳಿದಂತೆ ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಾದಲ್ಲಿ, ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಪ್ರವೀಣ್ (9449860916) ಅವರ ಮೂಲಕ ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು